ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಹುದ್ದೆಗೆ ಅರ್ಜಿ ಆಹ್ವಾನ

Update: 2020-09-23 14:15 GMT

ಉಡುಪಿ, ಸೆ.23:ಪ್ರಸ್ತುತ ಸಾಲಿಗೆ ಎನ್‌ಪಿಸಿಡಿಸಿಎಸ್ ಕಾರ್ಯಕ್ರಮದಡಿ ಗುತ್ತಿಗೆ ಆಧಾರದಲ್ಲಿ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯರು, ಆಪ್ತ ಸಮಾಲೋಚಕರು ಹಾಗೂ ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿಯಲ್ಲಿ ಫಿಸಿಯೋಥರಪಿಸ್ಟ್ ಮತ್ತು ರಿಹ್ಯಾಬಿಲಿಟೇಶನ್ ವರ್ಕರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಸರ್ವೇಕ್ಷಣಾ ಘಟಕ/ ಎನ್‌ಸಿಡಿ ಘಟಕ, ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು ಉಡುಪಿ ಇವರಿಗೆ ಅ.5ರೊಳಗೆ ಸಲ್ಲಿಸುವಂತೆ ಎನ್‌ಸಿಡಿ ಘಟಕ ಜಿಲ್ಲಾ ಆಯ್ಕೆ ಸಮಿತಿ ಸದಸ್ಯ ಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News