ಸೆ. 25ರ ಬಂದ್‌ಗೆ ಡಿವೈಎಫ್‌ಐ ಬೆಂಬಲ

Update: 2020-09-23 15:11 GMT

ಮಂಗಳೂರು, ಸೆ. 23: ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಬಲವಂತವಾಗಿ ಜಾರಿಗೆ ತರುತ್ತಿರುವ ಬಿಜೆಪಿ ಸರಕಾರದ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಸೆ.25ರಂದು ನೀಡಿದ ‘ಭಾರತ್ ಬಂದ್’ ಕರೆಗೆ ಡಿವೈಎಫ್‌ಐ ರಾಜ್ಯ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ರೈತರು, ಕಾರ್ಮಿಕರ ಬದುಕಿಗೆ ಸಂಬಂಧಿಸಿದ ಮಸೂದೆಗಳನ್ನು ಮೋದಿ ಸರಕಾರ ಯಾವುದೇ ಚರ್ಚೆಗಳಿಲ್ಲದೆ ಅಂಗೀಕರಿಸುತ್ತಿದೆ. ಇದರಿಂದ ಕಾರ್ಮಿಕರನ್ನು ಯಾವುದೇ ಪ್ರತಿರೋಧಗಳಿಲ್ಲದೆ ಕೆಲಸಗಳಿಂದ ಕಿತ್ತು ಹಾಕಲು, ಸವಲತ್ತುಗಳನ್ನು ನಿರಾಕರಿಸಲು ಮಾಲಕರಿಗೆ ಅನುಕೂಲ ಒದಗಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆಗಳಂತೂ ರೈತರನ್ನು ಪೂರ್ಣವಾಗಿ ಕಾರ್ಪೊರೇಟ್‌ಶಕ್ತಿಗಳಿಗೆ ಶರಣಾಗುವಂತೆ ರೂಪಿಸ ಲಾಗಿದೆ. ಕೇಂದ್ರದ ವಿರುದ್ಧ ರಾಜ್ಯಾದ್ಯಂತ ನಡೆಯುವ ಹೆದ್ದಾರಿ ತಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು ಕಾರ್ಯದರ್ಶಿ ಬಸವರಾಜ ಪೂಜಾರ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News