ಕಾರಿನಲ್ಲಿ ಜಾನುವಾರು ಸಾಗಾಟ : ಆರೋಪಿಗಳು ಪಾರಾರಿ

Update: 2020-09-23 17:23 GMT

ಉಳ್ಳಾಲ : ಕರುಗಳನ್ನು ಸಾಗಾಟ ನಡೆಸುತ್ತಿದ್ದ ಕಾರನ್ನು ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡ ಗಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಜಾನುವಾರು ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡಗಟ್ಟಿದ್ದರು. ಈ ಸಂದರ್ಭ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ‌. ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News