ಗಾಂಜಾ ಸಾಗಾಟ ಆರೋಪ: ಬಿಟ್ಟಂಗಾಲದಲ್ಲಿ ಓರ್ವನ ಬಂಧನ, ಮತ್ತೊಬ್ಬ ಪರಾರಿ

Update: 2020-09-24 11:32 GMT

ಮಡಿಕೇರಿ, ಸೆ.24: ಸಾರ್ವಜನಿಕರಿಗೆ ಮಾರಾಟ ಮಾಡಲು ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವೀರಾಜಪೇಟೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ವೀರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿಯವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಠಾಣಾ ಸರಹದ್ದಿನ ಬಿಟ್ಟಂಗಾಲ ಗ್ರಾಮದಲ್ಲಿ ಗೋಣಿಕೊಪ್ಪ ಕಡೆಯಿಂದ ವೀರಾಜಪೇಟೆ ಕಡೆಗೆ ಮೋಟಾರ್ ಸೈಕಲಿನಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಗಾಂಜಾ ಪತ್ತೆಯಾಗಿದೆ.

ಬೈಕ್ ನಲ್ಲಿದ್ದ ಕಿರಗೂರು ಗ್ರಾಮದ ಪೆಮ್ಮಂಡ ಯು. ಸೋಮಣ್ಣ ಅಲಿಯಾಸ್ ಸುಹಾಸ್ ಎಂಬವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ 45 ಗ್ರಾಂ ತೂಕದ ಗಾಂಜಾ, ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ಸಂದರ್ಭ ಮತ್ತೊಬ್ಬ ಆರೋಪಿ ಬಾಳುಗೋಡು ಗ್ರಾಮದ ಚೇಂದಂಡ ಬೋಪಣ್ಣ ಪರಾರಿಯಾಗಿರುವುದಾಗಿ ಹೇಳಲಾಗಿದೆ.

ವೀರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಸಿ.ಟಿ. ಜಯಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವೀರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ವೀಣಾನಾಯಕ್, ಗೋಣಿಕೊಪ್ಪ ಠಾಣೆಯ ಎಎಸ್‍ಐ ಸುಬ್ರಮಣಿ ಸಿಬ್ಬಂದಿಗಳಾದ ವೀರಾಜಪೇಟೆ ಗ್ರಾಮಾಂತರ ಠಾಣೆಯ ರಾಮಪ್ಪ ಮತ್ತು ಚಂದ್ರಶೇಖರ ಹಾಗೂ ಪೊನ್ನಂಪೇಟೆ ಠಾಣೆಯ ಎಂ.ಡಿ.ಮನು ಅವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News