ಯಡಿಯೂರಪ್ಪ ಶ್ರೀಮಂತರಿಗೆ ಅನುಕೂಲವಾಗುವ ಕಾಯ್ದೆಗಳ ಜಾರಿಗೆ ಮುಂದಾಗಿದ್ದಾರೆ: ನಟ ಚೇತನ್

Update: 2020-09-25 15:50 GMT

ಬೆಂಗಳೂರು, ಸೆ.25: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸಿರು ಶಾಲು ಧರಿಸಿ, ರೈತರನ್ನೇ ಮರೆತಿದ್ದಾರೆ ಎಂದು ನಟ, ಚಿಂತಕ ಚೇತನ್ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ರೈತ, ದಲಿತ, ಕಾರ್ಮಿಕ ಸಂಘಟನೆಗ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಜೈಲ್ ಭರೋ ಚಳುವಳಿಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಅವರು ಸದಾ ಹಸಿರು ಶಾಲು ಧರಿಸುತ್ತಾರೆ. ಅವರು ರೈತರ ಪರವಾಗಿಲ್ಲ. ಹೀಗಾಗಿಯೇ, ಶ್ರೀಮಂತರಿಗೆ ಅನುಕೂಲವಾಗುವ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ. ಆದರೆ, ನಾವು ಹೋರಾಟ ತೀವ್ರಗೊಳಿಸುತ್ತೇವೆ ಎಂದು ತಿಳಿಸಿದರು.

2006ನೇ ಸಾಲಿನಲ್ಲಿ ಬಿಹಾರ ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಯನ್ನು ಬದಲಾವಣೆ ಮಾಡಿದರು. ಆದರೆ, ಇಂದಿಗೂ ಅಲ್ಲಿನ ರೈತರಿಗೆ ಬೆಂಬಲ ಬೆಲೆ ದೊರೆತಿಲ್ಲ. ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇಂತಹ ನಿಜಾಂಶ ಕಣ್ಣ ಮುಂದೆ ಇದ್ದರೂ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಿರಿವಂತರ ಪ್ರಗತಿಗೆ ಕಾಯ್ದೆಗಳನ್ನು ಬದಲಾವಣೆ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News