ರೈತರ ಪ್ರತಿಭಟನೆ ಪ್ರತಿಪಕ್ಷಗಳಿಂದ ಅಪಪ್ರಚಾರ: ಪ್ರಧಾನಿ ಆರೋಪ

Update: 2020-09-25 17:05 GMT

ಹೊಸದಿಲ್ಲಿ, ಸೆ. 25: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪ್ರತಿಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಹಾಗೂ ಪ್ರತಿಪಕ್ಷಗಳು ರೈತರಿಗೆ ಸುಳ್ಳು ಹೇಳುತ್ತಿವೆ ಎಂದು ಆರೋಪಿಸಿದ್ದಾರೆ. ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನೂತನ ಕೃಷಿ ಮಸೂದೆ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ ಎಂದರು.

ಪ್ರತಿಪಕ್ಷಗಳು ರೈತರನ್ನು ತಮ್ಮ ಅನುಕೂಲಕ್ಕಾಗಿ ಬಳಸಿಕೊಂಡಿದ್ದವು ಎಂದು ಅವರು ಆರೋಪಿಸಿದ್ದಾರೆ. ಎಲ್ಲ ಬಿಜೆಪಿ ಕಾರ್ಯಕರ್ತರು ರೈತರನ್ನು ತಲುಪಬೇಕು ಹಾಗೂ ಕೃಷಿ ವಿಧೇಯಕಗಳ ಪ್ರಾಮುಖ್ಯತೆ, ಸಂಕೀರ್ಣತೆ ಹಾಗೂ ಅದು ಅವರನ್ನು ಹೇಗೆ ಸಶಕ್ತೀಕರಿಸಲಿದೆ ಎಂಬುದರ ಬಗ್ಗೆ ತುಂಬಾ ಸರಳ ಭಾಷೆಯಲ್ಲಿ ಅವರಿಗೆ ಮಾಹಿತಿ ನೀಡಬೇಕು ಎಂದರು. ಈ ಹಿಂದಿನ ಸರಕಾರಗಳು ರೈತರು ಅಥವಾ ಕಾರ್ಮಿಕರು ಎಂದಿಗೂ ಅರ್ಥ ಮಾಡಿಕೊಳ್ಳದ ಭರವಸೆ ಹಾಗೂ ಕಾನೂನಿನ ಸಂಕೀರ್ಣ ಜಾಲವನ್ನು ರೂಪಿಸಿತ್ತು. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಈ ಪರಿಸ್ಥಿತಿ ಬದಲಾಯಿಸಲು ಹಾಗೂ ರೈತರ ಕಲ್ಯಾಣಕ್ಕಾಗಿ ಕಾಯ್ದೆಗಳಲ್ಲಿ ಸುಧಾರಣೆ ತರಲು ನಿರಂತರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News