ಕರ್ನಾಟಕ ಬಂದ್ಗೆ ಸಿಪಿಐಎಂ ಬೆಂಬಲ
Update: 2020-09-25 17:10 GMT
ಉಡುಪಿ, ಸೆ.25: ರೈತ, ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಸೆ.28ರ ಸ್ವಯಂ ಪ್ರೇರಿತ ಕರ್ನಾಟಕ ಬಂದ್ಗೆ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ, ವಿದ್ಯುತ್ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ರೈತ ಸಂಘಟನೆಗಳ ಸಮನ್ವಯ ಸಮಿತಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗು ದಲಿತ ಪ್ರಗತಿಪರ ಸಂಘಟನೆಗಳು ಸೆ.28ರಂದು ಕರೆ ನೀಡಿರುವ ಸ್ವಯಂ ಪ್ರೇರಿತ ಕರ್ನಾಟಕ ಬಂದ್ನ್ನು ಎಲ್ಲರು ಯಶಸ್ವಿಗೊಳಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.