ಕಾಡಿನೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Update: 2020-09-25 17:10 GMT

ಮೈಸೂರು,ಸೆ.25: ಮೈಸೂರು ತಾಲೂಕಿನ ಮಾವಿನ ಹಳ್ಳಿ ಸಮೀಪದ ಕುರುಚಲು ಕಾಡಿನೊಳಗೆ ಮರವೊಂದರಲ್ಲಿ ವ್ಯಕ್ತಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶವವು ಸಂಪೂರ್ಣ ಕೊಳೆತು ಹೋಗಿದ್ದು ಗುರುತಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದು ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News