ಕಾಂಗ್ರೆಸ್‌ನಿಂದ ಪಂಚಿನ ಮೆರವಣಿಗೆ: ಮಿಥುನ್ ಸಹಿತ ಹಲವರ ಬಂಧನ

Update: 2020-09-25 17:15 GMT

ಮಂಗಳೂರು, ಸೆ.25: ಭೂ ಮಸೂದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಶುಕ್ರವಾರ ಸಂಜೆ ಪಂಜಿನ ಮೆರವಣಿಗೆಗೆ ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ ಘಟನೆ ನಡೆದಿದೆ.

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಸಂಜೆ 6 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಂಜಿನ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು, ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಸ್ಥಳಕ್ಕಾಗಮಿಸಿದ್ದರು. ಆದರೆ ಪೊಲೀಸರು ಪಂಜಿನ ಮೆರವಣಿಗೆಗೆ ಅವಕಾಶ ನೀಡಲಿಲ್ಲ.

ಇತ್ತ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಯುವ ಕಾಂಗ್ರೆಸ್‌ನ 30-40 ಕಾರ್ಯಕರ್ತರನ್ನು 2-3 ವ್ಯಾನ್‌ಗಳಲ್ಲಿ ಬಂಧಿಸಿ ಕರೆದೊಯ್ಯಲಾಯಿತು. ಬಳಿಕ ಬಿಡುಗಡೆಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News