ಮರಳು ದಿಬ್ಬಗಳ ತೆರವು : ತಾತ್ಕಾಲಿಕ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

Update: 2020-09-25 17:19 GMT

ಮಂಗಳೂರು, ಸೆ. 25:ದ.ಕ. ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ ಸಿಆರ್‌ಝಡ್ ಕ್ಲಿಯರೆನ್ಸ್ ಬಂದಿರುತ್ತದೆ.

ಈ ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ಮಾರ್ಗಸೂಚಿಯಂತೆ ಬುಧವಾರ ನಡೆದ ಜಿಲ್ಲಾ ಸಮಿತಿಯ ಸಭೆಯ ತೀರ್ಮಾನದಂತೆ ಈಗಾಗಲೇ ಗುರುತಿಸಲಾಗಿರುವ ಅರ್ಹ ಸಾಂಪ್ರ ದಾಯಿಕ ಮರಳು ಪರವಾನಿಗೆದಾರರಿಂದ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅನುಮತಿ ನೀಡುವ ಕುರಿತು ಸೆ.28ರಿಂದ ಅ.7ರವರೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗಾಗಿ ನಗರದ ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು (ದೂ.ಸಂ: 0824-2429932) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News