ಹಿರಿಯ ಉದ್ಯಮಿ, ಸಮಾಜ ಸೇವಕ ರಮಾನಂದ ಸಾಲ್ಯಾನ್ ನಿಧನ

Update: 2020-09-25 17:44 GMT

ಬೆಳ್ತಂಗಡಿ :  ಹಿರಿಯ ಉದ್ಯಮಿ ಹಾಗೂ ಸಮಾಜ ಸೇವಕ ರಮಾನಂದ ಸಾಲ್ಯಾನ್ ಅವರು ಅನಾರೋಗ್ಯದಿಂದ ಬಳಲಿ ಸೆ.25ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿಯ ಅನ್ನಪೂರ್ಣ ಮೆಟಲ್ಸ್ ಮತ್ತು ರಾಜರಾಮ ಏಜನ್ಸೀಸ್‌ನ ಮಾಲಕರಾಗಿದ್ದಾರೆ. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷರಾಗಿ, ಪಾಂಡುರಂಗ ಪ್ರತಿಷ್ಠಾನದ ಅಧ್ಯಕ್ಷರಾಗಿ, ವಿಶ್ಪ ಹಿಂದೂ ಪರಿಷತ್‌ನ ತಾಲೂಕು ಅಧ್ಯಕ್ಷರಾಗಿ, ರೋಟರಿ ಕ್ಲಬ್‌ನ ಹಿರಿಯ ಸದಸ್ಯರಾಗಿ, ಸಂಸ್ಕಾರ ಭಾರತಿಯ ಅಧ್ಯಕ್ಷರಾಗಿ,  ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದರು. 

ಇವರು ಸಂಗೀತ ಕಲಾಪ್ರಿಯರಾಗಿದ್ದು, ಆಶಾ ಸಾಲಿಯಾನ್ ಪ್ರತಿಷ್ಠಾನವನ್ನು ಸ್ಥಾಪಿಸಿ ಸಂಗೀತ ಕಾರ್ಯಕ್ರಮಗಳನ್ನು ತಾಲೂಕಿನಲ್ಲಿ ಮಾಡಿ ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News