ಸುರೇಶ್ ಆಚಾರ್ಯ ಪಿಲಾರು ನಿಧನ
Update: 2020-09-26 12:24 GMT
ಮುಂಬೈ, ಸೆ.26: ಬೃಹನ್ಮುಂಬಯಿಯ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆಗೈದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಂಘದ 2012 -2015ನೇ ಸಾಲಿನಲ್ಲಿ ಜೊತೆ ಕೋಶಾಧಿಕಾರಿ ಆಗಿದ್ದ ಸುರೇಶ್ ಆಚಾರ್ಯ (49) ಇಂದಿಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉದಯವಾಣಿ ಕನ್ನಡ ದೈನಿಕದ ಮುಂಬೈ ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿ ಸದ್ಯ ವಕೀಲ ವೃತ್ತಿಯಲ್ಲಿ ತೊಡಗಿಸಿದ್ದ ಇವರು ಉಡುಪಿ ಜಿಲ್ಲೆಯ ಕಾರ್ಕಳ ಪಿಲಾರು ಮೂಲದವರಾಗಿದ್ದು ನವಿ ಮುಂಬಯಿ ನೆರೂಲ್ ಸೆಕ್ಟರ್ 10ರ ಗಾಂವ್ದೇವಿ ಇಲ್ಲಿನ ಪ್ರಸಾದ್ ಬಿಲ್ಡಿಂಗ್ನಲ್ಲಿ ವಾಸವಾಗಿದ್ದರು.
ಮೃತರು ಪತ್ನಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಸುರೇಶ್ ಆಚಾರ್ಯ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.