ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಪರಿಸರದಲ್ಲಿ ಚಿರತೆ ದಾಳಿ

Update: 2020-09-26 12:46 GMT

ಮಣಿಪಾಲ, ಸೆ.26: ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಪರಿಸರದಲ್ಲಿ ಚಿರತೆ ಯೊಂದು ಸೆ. 25ರಂದು ರಾತ್ರಿ ವೇಳೆ ದಾಳಿ ನಡೆಸಿ ಮನೆಯೊಂದರ ಸಾಕು ನಾಯಿಯನ್ನು ಬಲಿ ಪಡೆದಿರುವ ಬಗ್ಗೆ ವರದಿಯಾಗಿದೆ.

ಶೆಟ್ಟಿಬೆಟ್ಟು ಬಬ್ಬರ್ಯ ದೈವಸ್ಥಾನ ಸ್ಥಾನಕ್ಕೆ ಹೋಗುವ ಪ್ರಮುಖ ರಸ್ತೆಯಲ್ಲಿ ಇರುವ ಇಂದಿರಾ ಆಚಾರ್ಯ ಎಂಬವರ ಮನೆಯಲ್ಲಿ ಕಟ್ಟಿ ಹಾಕಿದ ಸಾಕು ನಾಯಿಯನ್ನು ಚಿರತೆ ಕೊಂದು ತಿಂದಿರುವುದು ಕಂಡುಬಂದಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಇತ್ತೀಚೆಗಷ್ಟೆ ಅಲ್ಲೇ ಸಮೀಪದ ಎಂಡ್‌ಪಾಯಿಂಟ್ ಬಳಿ ಇರಿಸಲಾಗಿದ್ದ ಅರಣ್ಯ ಇಲಾಖೆಯ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿತ್ತು. ಇದೀಗ ಈ ಪರಿಸರದಲ್ಲಿ ಮತ್ತೆ ಎರಡು- ಮೂರು ಚಿರತೆಗಳು ಓಡಾಟ ನಡೆಸುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News