ದ.ಕ. ಜಿಲ್ಲೆ : ಕೋವಿಡ್‌ಗೆ ಎಂಟು ಬಲಿ, ಹೊಸದಾಗಿ 420 ಮಂದಿಗೆ ಕೊರೋನ ಸೋಂಕು

Update: 2020-09-26 14:40 GMT

ಮಂಗಳೂರು, ಸೆ. 26: ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದರಿಂದ ಶನಿವಾರವೂ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ. ಆದರೆ ರಾಜ್ಯ ಬುಲೆಟಿನ್ ಪ್ರಕಟವಾಗಿದ್ದು, ಅದರ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 420 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಹಲವು ದಿನಗಳಿಂದ ಕೊರೋನ ಸೋಂಕಿತರ ಸಂಖ್ಯೆ 200ರ ಆಸುಪಾಸಿನಲ್ಲಿರುತ್ತಿತ್ತು. ಶನಿವಾರ ಮತ್ತೆ 400ರ ಗಡಿ ದಾಟಿದೆ. ಜೊತೆಗೆ ಕೊರೋನದಿಂದ ಎಂಟು ಮಂದಿ ಮೃತಪಟ್ಟಿದ್ದು, 152 ಮಂದಿಗೆ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡುಬಂದಿದೆ.

ಎನ್‌ಎಚ್‌ಎಂ ಸಿಬ್ಬಂದಿ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಬೇಡಿಕೆ ಈಡೇರಿಕೆ ಬಗ್ಗೆ ಸರಕಾರದ ಮಟ್ಟದಲ್ಲಿ ಇನ್ನೂ ತೀರ್ಮಾನ ಆಗಿಲ್ಲ. ಹಾಗಾಗಿ ಜಿಲ್ಲಾ ಬುಲೆಟಿನ್ ಲಭ್ಯವಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News