ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ದಲಿತರಿಗೆ, ಸಣ್ಣ ರೈತರಿಗೆ ತೊಂದರೆ ಇಲ್ಲ: ಸಿಎಂ ಬಿಎಸ್‌ವೈ

Update: 2020-09-26 15:05 GMT

ಬೆಂಗಳೂರು, ಸೆ.26: ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ದಲಿತರಿಗೆ ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ತೊಂದರೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಶನಿವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಸುಧಾರಣೆಗಳ ವಿಧೇಯಕದ ಕುರಿತು ಶಾಸಕ ಎನ್.ಮಹೇಶ್ ಚರ್ಚೆ ಮಾಡುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿಗಳು, ದಲಿತರಿಗೆ ಅನ್ಯಾಯ ಆಗದಂತೆ ಎಚ್ಚರ ವಹಿಸುತ್ತೇವೆ ಎಂದು ಭರವಸೆ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ 1 ಎಕರೆ ಭೂಮಿಯನ್ನು ಮಾರಾಟ ಮಾಡಲು ಬಿಡುವುದಿಲ್ಲ. ಅದೇ ರೀತಿ, ಸಣ್ಣ ರೈತರ ಹಿತವನ್ನು ಕಾಪಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News