ಸೆ.28ರಂದು ನಡೆಯಬೇಕಿದ್ದ ಎಸೆಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ

Update: 2020-09-26 15:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.26: ವಿವಿಧ ರೈತ ಸಂಘಟನೆಗಳು ಇದೇ ತಿಂಗಳು 28ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಎಸೆಸೆಲ್ಸಿ ಪೂರಕ ಪರೀಕ್ಷೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಸೆ.28 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತದ ವಿಷಯದ ಪರೀಕ್ಷೆಗಳನ್ನು ನಡೆಸಲು ಈ ಹಿಂದೆ ನಿಗದಿಪಡಿಸಲಾಗಿದ್ದು, ಇದೀಗ ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಕಾರಣದಿಂದಾಗಿ ಪರೀಕ್ಷೆಯನ್ನು ಸೆ.29ಕ್ಕೆ ನಡೆಸಲು ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ಪರೀಕ್ಷೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News