ಸರಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲು

Update: 2020-09-26 17:48 GMT

ಬೆಂಗಳೂರು, ಸೆ.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಸೋಲುಂಟಾಯಿತು.

ಶುಕ್ರವಾರ ವಿಧಾನಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು. 'ಬಹುಮತ ಇದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರವು ಸದನದ ವಿಶ್ವಾಸ ಕಳೆದುಕೊಂಡಿದೆ' ಎಂದು ಸಿದ್ದರಾಮಯ್ಯ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದರು. ಅಲ್ಲದೆ, ವಿಧಾನಸಭೆಯ ನಿಯಮ 167ರಡಿ ತಮಗೆ ನೋಟಿಸ್ ನೀಡಿದ್ದೇನೆ. ಹೀಗಾಗಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು' ಎಂದು ಕೋರಿದ್ದರು.

ಕೋವಿಡ್ ಪಾಸಿಟಿವ್ ಬಂದಿರುವ ಶಾಸಕರನ್ನು ಸದನಕ್ಕೆ ಕರೆಸಲು ಸಾಧ್ಯವಿಲ್ಲದ ಕಾರಣ ಮತದಾನಕ್ಕೆ ಅವಕಾಶವಿರಲಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯವನ್ನು ಧ್ವನಿಮತಕ್ಕೆ ಹಾಕಲಾಯಿತು. ಧ್ವನಿಮತದಲ್ಲಿ ಕಾಂಗ್ರೆಸ್ ಪಕ್ಷ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News