ಮುದ್ದೇಬಿಹಾಳ: ಮಳೆಗೆ ಮನೆ ಮೇಲ್ಛಾವಣಿ ಕುಸಿತ; ಬಾಲಕಿ ಮೃತ್ಯು

Update: 2020-09-27 10:05 GMT

ವಿಜಯಪುರ, ಸೆ.27: ಜಿಲ್ಲಾದ್ಯಂತ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದಲ್ಲಿ ನಡೆದಿದೆ.

ಮರೆವ್ವ ಹುಲಗಪ್ಪ ಬಿಜ್ಜೂರ್ (11) ಮೃತಪಟ್ಟ ಬಾಲಕಿ. ಘಟನೆಯಲ್ಲಿ ರೇಖಾ ಲೋಟಗೇರಿ ಎಂಬ ಬಾಲಕಿಯ ತಲೆ, ಕಾಲಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ ಜಿ.ಎಸ್ ಮಳಗಿ, ಕಂದಾಯ ನಿರೀಕ್ಷಕ ಎಸ್ ಬಿ ಮಾವಿನಮಟ್ಟಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ನಿರಂತರ ಮಳೆಗೆ ಚವನಬಾವಿ ಗ್ರಾಮದಲ್ಲಿ 12 ಮನೆಗಳು ಹಾಗೂ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿವೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News