ಶೀಘ್ರವೇ ಸಚಿವ ಸಂಪುಟಕ್ಕೆ ಸೇರ್ಪಡೆ: ಎಂಟಿಬಿ ನಾಗರಾಜ್
Update: 2020-09-27 13:14 GMT
ಬೆಂಗಳೂರು, ಸೆ.27: ಶೀಘ್ರದಲ್ಲಿಯೇ ನಾವು ಸಚಿವರಾಗುತ್ತೇವೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ್ ತಿಳಿಸಿದರು.
ರವಿವಾರ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಸೇರ್ಪಡೆ ಆಗುತ್ತೇವೆ ಎಂದರು.
ಅಧಿವೇಶನಕ್ಕೆ ಸಚಿವರಾಗಿ ಬರುತ್ತೇವೆ ಎಂದು ಹೇಳಿದ್ದು ನಿಜ, ಆದರೆ ಸ್ವಲ್ಪ ವಿಳಂಬವಾಗಿದೆ. ಸದ್ಯಕ್ಕೆ ವಿಧಾನ ಪರಿಷತ್ ಸದಸ್ಯರಾಗಿ ಬಂದಿದ್ದು, ಅದಕ್ಕೆ ತೃಪ್ತಿಯಾಗಿದ್ದೇವೆ. ಮುಂದಿನ ದಿನದಲ್ಲಿ ನಮ್ಮನ್ನು ಸಚಿವರನ್ನಾಗಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.