ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

Update: 2020-09-27 16:31 GMT

ಕಾರ್ಕಳ, ಸೆ. 27 ಹಿರ್ಗಾನ ಚಿಕ್ಕಲ್ ಬೆಟ್ಟು ನಿವಾಸಿ ಉದ್ಯಮಿ ಸುನೀಲ್ ಶೆಟ್ಟಿ (45) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಸುನೀಲ್ ಶೆಟ್ಟಿ ಪುಣೆಯಲ್ಲಿ ಹೊಟೇಲ್ ಉದ್ಯಮ ನಡೆಸುತಿದ್ದರು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಪುಣೆಯಿಂದ ಊರಿಗೆ ಮರಳಿದ್ದರು.  ಎಂಟು ತಿಂಗಳಿಂದ ಮನೆಯಲ್ಲಿ ಇದ್ದ ಅವರು ರವಿವಾರ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ ಬಳಿಕ ಪರವಾನಿಗೆಯ ಕೋವಿ ಹಿಡಿದುಕೊಂಡು ಮನೆಯ ಮುಂಭಾಗದ ಕೃಷಿ ತೋಟದ ಕಡೆಗೆ ತೆರಳಿದ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ವಿವಾಹಿತರಾಗಿರುವ ಅವರಿಗೆ ಪತ್ನಿ, ಪುತ್ರಿ ಇದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News