ಕೊರೋನ ಸೋಂಕಿನಿಂದ ಕಾನ್‍ಸ್ಟೆಬಲ್ ಮೃತ್ಯು

Update: 2020-09-27 17:28 GMT

ಬೆಂಗಳೂರು, ಸೆ.27: ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಈ ಸೋಂಕಿನಿಂದ ಪೊಲೀಸ್ ಕಾನ್‍ಸ್ಟೆಬಲ್ ಮೃತಪಟ್ಟಿದ್ದಾರೆ.

ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸ್ ಕಾನ್‍ಸ್ಟೆಬಲ್ ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿತ್ತು. ಇದಾದ ನಂತರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕಾನ್ಸ್ ಟೇಬಲ್ ಅವರು ರವಿವಾರ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News