ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಬಿಜೆಪಿಯಿಂದ ರೈತರಿಗೆ ಅನ್ಯಾಯ: ರಾಮಲಿಂಗಾರೆಡ್ಡಿ

Update: 2020-09-27 18:04 GMT

ಬೆಂಗಳೂರು, ಸೆ.27: ಆಡಳಿತರೂಢ ಬಿಜೆಪಿ ಸರಕಾರ ರೈತ ವಿರೋಧಿಯಾಗಿದ್ದು, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ಮಾಡುತ್ತಿದೆ. ಈ ಎಲ್ಲ ಪ್ರಯತ್ನಗಳಿಗೆ ಕಡಿವಾಣ ಹಾಕಲು ಸೆ.28ರಂದು ರೈತರು ನಡೆಸುವ ಹೋರಾಟಕ್ಕೆ ನಮ್ಮ ಬೆಂಬಲವೂ ಇದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.     

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ರೈತರ ಧ್ವನಿಯಾಗಿದೆ. ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರಲ್ಲಿ ಶಕ್ತಿ ತುಂಬುವ ಕೆಲಸ ಮಾಡಿದೆ. ಆದರೆ, ಬಿಜೆಪಿ ಸರಕಾರ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೈತರಿಗೆ ಅನ್ಯಾಯ ಎಸಗುತ್ತಿದೆ ಎಂದು ಕಿಡಿಕಾರಿದರು.

ರೈತರು ಶಾಂತಿಯುತವಾಗಿ ಹೋರಾಟ ನಡೆಸಬೇಕು. ಕಾಂಗ್ರೆಸ್ ಪಕ್ಷವೂ ಹೋರಾಟಕ್ಕೆ ಬೆಂಬಲ ನೀಡಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News