ಉಡುಪಿ: ಸೆ.29 ರಂದು ಮೀನುಗಾರಿಕಾ ಸಚಿವರ ಪ್ರವಾಸ
Update: 2020-09-28 14:03 GMT
ಉಡುಪಿ, ಸೆ. 28: ರಾಜ್ಯದ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೆ.29 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 7 ಕ್ಕೆ ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ, 10 ಕ್ಕೆ ಕಾರ್ಕಳ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋಟದಲ್ಲಿ ವಾಸ್ತವ್ಯ ಮಾಡು ವರು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.