ದ.ಕ. ಜಿಲ್ಲೆ : ಕೋವಿಡ್‌ಗೆ ಏಳು ಬಲಿ, ಹೊಸದಾಗಿ 217 ಮಂದಿಗೆ ಕೊರೋನ ಸೋಂಕು

Update: 2020-09-28 15:36 GMT

ಮಂಗಳೂರು, ಸೆ. 28: ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದರಿಂದ ಸೋಮವಾರವೂ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ. ಆದರೆ ರಾಜ್ಯ ಬುಲೆಟಿನ್ ಪ್ರಕಟವಾಗಿದ್ದು, ಅದರ ಪ್ರಕಾರ ಜಿಲ್ಲೆಯಲ್ಲಿ 217 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಕೊರೋನದಿಂದ ಏಳು ಮಂದಿ ಮೃತಪಟ್ಟಿದ್ದು, 190 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಎನ್‌ಎಚ್‌ಎಂ ಸಿಬ್ಬಂದಿ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಬೇಡಿಕೆ ಈಡೇರಿಕೆ ಬಗ್ಗೆ ಸರಕಾರದ ಮಟ್ಟದಲ್ಲಿ ಇನ್ನೂ ತೀರ್ಮಾನ ಆಗಿಲ್ಲ. ಹಾಗಾಗಿ ಜಿಲ್ಲಾ ಬುಲೆಟಿನ್ ಲಭ್ಯವಾಗು ತ್ತಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News