ಗುರು ರಾಘವೇಂದ್ರ ಬ್ಯಾಂಕ್ ವಂಚನೆ ಪ್ರಕರಣ: ಮೂವರ ಬಂಧನ

Update: 2020-09-28 16:37 GMT

ಬೆಂಗಳೂರು, ಸೆ.28: ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ವಂಚನೆ ಆರೋಪ ಪ್ರಕರಣ ಸಂಬಂಧ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಹಿನ್ನೆಲೆ ಮೂವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.

ಬಾಲರೆಡ್ಡಿ, ವೆಂಕಟೇಶ್ ಮತ್ತು ಸುಬ್ರಹ್ಮಣ್ಯ ಎಂಬವರು ಬಂಧಿತ ಆರೋಪಿಗಳೆಂದು ಮೂಲಗಳು ತಿಳಿಸಿವೆ.

ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾಗಿದ್ದರು ಎಂದು ಹೇಳಲಾಗಿದೆ. ಪ್ರಮುಖ ಆರೋಪಿಗಳಾದ ಕೆ.ರಾಮಕೃಷ್ಣ, ಜಿ.ರಘುನಾಥ್ ಮತ್ತು ಕೆ.ಆರ್.ವೇಣುಗೋಪಾಲ್ ತಲೆಮರೆಸಿಕೊಳ್ಳುವುದಕ್ಕೆ ನೆರವಾಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿದೆ ಎಂದು ಸಿಐಡಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News