​ಬೆಳ್ತಂಗಡಿ : ಶತಾಯುಷಿ ನಿಧನ

Update: 2020-09-28 16:50 GMT

ಬೆಳ್ತಂಗಡಿ : ಸವಣಾಲು ಗ್ರಾಮದ ಪಿಲಿಕಲ ಲೋಕಮ್ಮ (106) ತನ್ನ ಸ್ವಗೃಹದಲ್ಲಿ ಸೋಮವಾರ ನಿಧನರಾದರು.

ಮೃತರು ಶತಾಯುಷಿಯಾಗಿದ್ದು, ಮಕ್ಕಳು, ಮೊಮ್ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಸಿಪಿಐ (ಎಂ) ತಾಲೂಕು ಕಾರ್ಯದರ್ಶಿ , ನ್ಯಾಯವಾದಿ ಶಿವಕುಮಾರ್ ಎಸ್. ಎಂ , ಎಪಿಎಂಸಿ ಮಾಜಿ ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ, ತಾ.ಪಂ ಸದಸ್ಯೆ ಜಯಶ ಹಾಗೂ ಇತರರು ಆಗಮಿಸಿ ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News