ರಾಯಚೂರು: ನಗರಸಭೆ ಸದಸ್ಯ ಮಕ್ಬೂಲ್‌ ಕೊಲೆ

Update: 2020-09-29 04:02 GMT
ಮಕ್ಬೂಲ್

ರಾಯಚೂರು: ನಗರಸಭೆ ಸದಸ್ಯ ಮಕ್ಬೂಲ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಗಂಭೀರ ಹಲ್ಲೆ ನಡೆಸಿದ  ಪರಿಣಾಮ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ನಗರದ ಝಾಕಿರ್ ಹುಸೈನ್ ವೃತ್ತದ ಬಳಿ ಘಟನೆ ನಡೆದಿದ್ದು, ನಗರಸಭೆ ಸದಸ್ಯ ಮಕ್ಬೂಲ್ ನಿನ್ನೆ ರಾತ್ರಿ ಝಾಕಿರ್ ಹುಸೈನ್ ವೃತ್ತದ ಬಳಿ ಇದ್ದ ಸಂದರ್ಭ ದುಷ್ಕರ್ಮಿಗಳ ತಂಡವೊಂದು ಮಕ್ಬೂಲ್ ಅವರ ಮೇಲೆ ಮಾರಕಾಸ್ತ್ರಗಳಿಂದ‌ ದಾಳಿ ನಡೆಸಿದೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ನಗರಸಭೆ ಮಕ್ಬೂಲ್ ರನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು, ಪರೀಲನೆ ನಡೆಸಿದ್ದಾರೆ. ಈ ಕುರಿತು ಸದರ್ ಬಝಾರ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News