ಅಂಬಿಗರ ಚೌಡಯ್ಯ ನಿಗಮದಿಂದ ಅರ್ಜಿ ಆಹ್ವಾನ

Update: 2020-09-29 16:08 GMT

ಮಂಗಳೂರು, ಸೆ.29: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿ ಸುತ್ತಿರುವ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಹಾಗೂ ಕಿರುಸಾಲ (ಸ್ವ-ಸಹಾಯ ಗುಂಪು) ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಪಡೆದು ನಿಗಮದ ಕಚೇರಿಗೆ ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು. ಅರ್ಜಿದಾರರು ಪ್ರವರ್ಗ-1ರ 6(A)ಯಿಂದ ಗಂಗಾಮತ, ಬೆಸ್ತ, ಮೊಗವೀರ, ಅಂಬಿಗ/ಅಂಬಿ, ಬೆಸ್ತರ್, ಭೋಯಿ, ಗಲಾಡಕೊಂಕಣಿ, ಖಾರ್ವಿ/ಕೊಂಕಣಖಾರ್ವಿ, ಹಾಗೂ ಇದರ ಉಪಜಾತಿಗೆ ಸೇರಿದವರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಭವನ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಸಂಪರ್ಕಿಸು ವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News