ಬಿರುಕು: ಅರಾಟೆ ಸೇತುವೆಗೆ ಅಪಾಯವಿಲ್ಲ- ತಾಂತ್ರಿಕ ತಜ್ಞರ ಸಮಿತಿಯಿಂದ ವರದಿ

Update: 2020-09-29 16:46 GMT

ಉಡುಪಿ, ಸೆ.29: ನಿರ್ಮಾಣಗೊಂಡ ಮೂರೇ ವರ್ಷಗಳಲ್ಲಿ ಬಿರುಕು ಬಿಟ್ಟು ವಾಹನ ಸಂಚಾರ ನಿರ್ಬಂಧಗೊಂಡ ಕುಂದಾಪುರ-ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಮುಳ್ಳಿಕಟ್ಟೆ ಸೇತುವೆಗೆ ಯಾವುದೇ ರೀತಿಯಲ್ಲಿ ಅಪಾಯ ಕಂಡುಬಂದಿಲ್ಲ ಎಂದು ತಜ್ಞರ ವರದಿ ತಿಳಿಸಿದೆ.

ಬಿರುಕುಬಿಟ್ಟ ಸೇತುವೆಯನ್ನು ಪರಿಶೀಲಿಸಿ ವರದಿ ನೀಡುವಂತೆ ತಾಂತ್ರಿಕ ತಜ್ಞರ ಸಮಿತಿಗೆ ಸೂಚಿಸಲಾಗಿದ್ದು, ಸಮಿತಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದೆ. ಈ ವರದಿಯಂತೆ ಸೇತುವೆ ರಚನೆಯಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ. ಸೇತುವೆಯ ಮೇಲ್ಬಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದ್ದು, ಸ್ವಾನ್ ಜಾಯಿಂಟ್‌ನಲ್ಲಿ ಇದು ಕಂಡು ಬಂದಿರುವುದರಿಂದ ಯಾವುದೇ ಅಪಾಯವಿಲ್ಲ. ಹಾಗೂ ಸೇತುವೆ ಮೂಲ ರಚನೆಯಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿದುಬಂದಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News