ಅ.2ಕ್ಕೆ ಸ್ವಚ್ಛೋತ್ಸವ- ನಿತ್ಯೋತ್ಸವ ಮಾಸಾಚರಣೆ ಉದ್ಘಾಟನೆ
Update: 2020-09-29 16:48 GMT
ಉಡುಪಿ, ಸೆ. 29: ಉಡುಪಿ ಜಿಪಂ, ತಾಪಂ ಹೆಬ್ರಿ, ಗ್ರಾಮ ಪಂಚಾಯತ್ ವರಂಗ ಹೆಬ್ರಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಹಾಗೂ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಅ.2 ರಂದು ಬೆಳಗ್ಗೆ 10:30ಕ್ಕೆ ಮುನಿಯಾಲು ವರಂಗ ಗ್ರಾಪಂ ಕಚೇರಿ ಬಳಿಯ ಘನ ತ್ಯಾಜ್ಯ ಸಂಪನ್ಮೂಲ ಘಟಕ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಗೃಹ ಮತ್ತು ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಘನ ತ್ಯಾಜ್ಯ ಸಂಪನ್ಮೂಲ ಘಟಕದ ಏಕರೂಪದ ಬ್ರ್ಯಾಂಡಿಂಗ್ನ ಲೋಕಾರ್ಪಣೆಯನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ನೆರವೇರಿಸುವರು. ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.