ಸೆ.30ರಂದು ಮಲ್ಲಿಗೆ ಕೃಷಿ ಮಾಹಿತಿ ಶಿಬಿರ

Update: 2020-09-29 16:56 GMT

ಉಡುಪಿ, ಸೆ. 29: ಜಿಲ್ಲಾ ಕೃಷಿಕ ಸಂಘದ ಕಾಪು ವಲಯ ಸಮಿತಿ ಆಯೋಜಿಸಿರುವ ವೈಜ್ಞಾನಿಕ ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಕ್ರಮ ಸೆ.30ರ  ಬೆಳಗ್ಗೆ 11 ಗಂಟೆಗೆ ಶಂಕರಪುರ ಬಿಳಿಯಾರು ವಿಠಲ ಆಚಾರ್ಯ ಇವ ರ ಮನೆ ವಠಾರದಲ್ಲಿ ನಡೆಯಲಿದೆ.

ಇನ್ನಂಜೆ ವ್ಯವಸಾಯಿಕ ಸಹಕಾರಿ ಬ್ಯಾಂಕಿನ ಉಪ ಪ್ರಬಂಧಕ ಗೋಪಾಲಕೃಷ್ಣ ರಾವ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ವಿಠಲ ಆಚಾರ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜೇಶ್ ರಾವ್ ಮತ್ತು ಶಕುಂತಳ ಆಚಾರ್ಯ ಭಾಗವಹಿಸಲಿದ್ದಾರೆ.

ಮಾಹಿತಿದಾರರಾಗಿ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಹಾಗೂ ಕಾಪು ವಲಯ ಸಮಿತಿಯ ವೆೀಣುಗೋಪಾಲ ಎಂ. ಭಾಗವಹಿಸಲಿದ್ದಾರೆ.

ಲಾಭದಾಯಕವಾಗಿ ವೈಜ್ಞಾನಿಕ ಹಾಗೂ ಕಡಿಮೆ ಖರ್ಚಿನಲ್ಲಿ ಮಲ್ಲಿಗೆ ಕೃಷಿ ಮಾಡುವ ಕ್ರಮಗಳು, ಬೆಳೆ ನಾಟಿ, ಕೀಟ-ರೋಗ ಬಾಧೆಗಳ ನಿರ್ವಹಣೆ ಕುರಿತ ಸಮಗ್ರ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಕೃಷಿಕರು, ಕೃಷಿ ಆಸಕ್ತರು ಭಾಗವಹಿಸಬಹುು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News