ಕಾನೂನು ಸಲಹೆಗಾರರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Update: 2020-09-29 17:11 GMT

ಮಂಗಳೂರು, ಸೆ.29: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಸ್ವಾಧೀನ ಹಾಗೂ ಇತರ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಅರ್ಹರಿಂದ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಕಾನೂನು ಕೋಶದಲ್ಲಿ ನಿವೃತ್ತ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ಉಪತಹಶೀಲ್ದಾರ್/ ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಕರ್ನಾಟಕ ನಾಗರಿಕ ಸೇವಾ ನಿಯಮ 1958ರ ನಿಯಮ 313(ಬಿ) ಪ್ರಕಾರ ಮಾಸಿಕ ಸಂಚಿತ ವೇತನ ನಿಗದಿಗೊಳಿಸಿ ನೇಮಕಾತಿಗೊಳಿಸಲು ಆದೇಶಿಸಿದೆ.

ಕಾನೂನು ಸಲಹೆಗಾರರ ತಾತ್ಕಾಲಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಅ. 1 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News