ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆದಿತ್ಯನಾಥ್‌ಗೆ ಪ್ರಧಾನಿ ಸೂಚನೆ

Update: 2020-09-30 12:26 GMT

 ಲಕ್ನೊ, ಸೆ.30: ಉತ್ತರಪ್ರದೇಶದ ಹಥ್ರಾಸ್‌ನಲ್ಲಿ 20ರಹರೆಯದ ದಲಿತ ಯುವತಿಯ ಮೇಲೆ ಮೇಲ್ಜಾತಿಯ ನಾಲ್ವರು ದುರುಳರು ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡಿ ಸಾವನ್ನಪ್ಪಲು ಕಾರಣರಾದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ.

ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆ ಮಹಿಳೆಯನ್ನು ಪೊಲೀಸರೇ ಬುಧವಾರ ರಾತ್ರಿ ಅಂತಿಮ ಕ್ರಿಯೆ ನಡೆಸಿರುವುದು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣದ ತನಿಖೆ ನಡೆಸಲು ಆದಿತ್ಯನಾಥ್ ಅವರು ಮೂವರು ಸದಸ್ಯರ ತನಿಖಾ ತಂಡವನ್ನು ರಚಿಸಿದ್ದಾರೆ. ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ವೇಗ ಹಳಿಯ ನ್ಯಾಯಾಲಯದಲ್ಲಿ ತನಿಖೆ ನಡೆಸಲು ಆದಿತ್ಯನಾಥ್ ಸೂಚಿಸಿದ್ದಾರೆ.

ಜೀವನ್ಮರಣ ಹೋರಾಟ ನಡೆಸಿದ ದಲಿತ ಯುವತಿ ಮಂಗಳವಾರ ದಿಲ್ಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News