ಅ. 2 : 'ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನ ಅಭಿಯಾನ' ಸಮಾರೋಪ ಸಮಾರಂಭ

Update: 2020-09-30 11:23 GMT

ಮಂಗಳೂರು : 'ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರ ಅಭಿಯಾನದ ಸಮಾರೋಪ ಸಮಾರಂಭ ಅ. 2 ರಂದು ಮಂಗಳೂರಿನ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಸಮಿತಿ ತಿಳಿಸಿದೆ.

ಅಂದು ಬೆಳಗ್ಗೆ 9 ಗಂಟೆಗೆ ಪ್ಲಾಸ್ಮಾ ಹಾಗೂ ರಕ್ತದಾನಿಗಳ ಸಂಗಮ ನಡೆಯಲಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಯೆನೆಪೊಯ ಬ್ಲಡ್ ಬ್ಯಾಂಕ್ ಸಹಬಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಮದ್ಯಾಹ್ನ 2:30ಕ್ಕೆ ರಕ್ತದಾನ ಅಭಿಯಾನದ ಸಮಾರೋಪ ಸಮಾರಂಭ ನಡೆಯಲಿದ್ದು,  ದ.ಕ ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷರಾದ ಸಯ್ಯಿದ್  ಅಮೀರ್ ತಂಙಳ್ ಕಿನ್ಯ ದುಃವಾ ನೇತೃತ್ವ ನೀಡಲಿದ್ದಾರೆ. ಶೈಖುನಾ ಮಿತ್ತಬೈಲು ಉಸ್ತಾದರ ಪುತ್ರ ಇರ್ಷಾದ್ ದಾರಿಮಿ ಅಲ್ ಜಝ್ಹರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಎಸ್ಕೆಎಸ್ಸೆಸ್ಸೆಫ್ ವಿಖಾಯ ಜಿಲ್ಲಾ ಚಯರ್ಮ್ಯಾನ್ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ. ಸೆಲ್ವಮಣಿ, ಶಾಸಕರಾದ ಯು.ಟಿ ಖಾದರ್, ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಹಾಗು ಇತರರು ಭಾಗವಹಿಸಲಿದ್ದಾರೆ ಎಂದು ಎಸ್ಕೆಎಸ್ಸೆಸ್ಸೆಫ್ ವಿಖಾಯ ದಕ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News