​ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ನಿಷೇಧಾಜ್ಞೆ

Update: 2020-09-30 12:48 GMT

ಉಡುಪಿ, ಸೆ.30: ಜಿಲ್ಲೆಯಲ್ಲಿ ನಿಗದಿ ಪಡಿಸಿರುವ 7 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 4ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆ ಶಾಂತಿಯುತ ಹಾಗೂ ದೋಷರಹಿತವಾಗಿ ನಡೆಯಲು ಮತ್ತು ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರಗಳ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದುಘೋಷಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ದಿನದಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಜಾರಿಯಲ್ಲಿರುತ್ತೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News