ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆ

Update: 2020-09-30 16:35 GMT

ಮಲ್ಪೆ, ಸೆ.30: ಹಣಕಾಸಿನ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಮೀನು ಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.30ರಂದು ಬೆಳಗ್ಗೆ ಕಲ್ಯಾಣ ಪುರ ಮಿಲ್‌ರೋಡ್ ಎಂಬಲ್ಲಿ ನಡೆದಿದೆ.

ಮೃತರನ್ನು ಕೃಷ್ಣ ಕಾಂಚನ್(42) ಎಂದು ಗುರುತಿಸಲಾಗಿದೆ. ಇವರು ಕಳೆದ 20 ವರ್ಷಗಳಿಂದ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಸುಮಾರು 7-8 ತಿಂಗಳಿಂದ ಸಾಲದ ಹಣದ ತೊಂದರೆಯಿಂದ ಮಾನಸಿಕ ವಾಗಿ ನೊಂದು ಹಳೆಯ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News