ನಿವೃತ್ತ ತಹಶೀಲ್ದಾರ್ ಮನೆ, ಕಚೇರಿಗೆ ಎಸಿಬಿ ದಾಳಿ

Update: 2020-09-30 17:14 GMT

ಬೆಂಗಳೂರು, ಸೆ.30: ಸರಕಾರಿ ಜಮೀನು ಖಾತೆ ಬದಲಾವಣೆ ಆರೋಪ ಸಂಬಂಧ ಬೆಂಗಳೂರು ಉತ್ತರ ತಾಲೂಕಿನ ಯಲಹಂಕದ ನಿವೃತ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ ಗ್ರಾಮದ ಸರ್ವೇ ನಂ.184ರಲ್ಲಿ 4 ಎಕರೆ ಸರಕಾರಿ ಜಮೀನಿನ ಖಾತೆ ಬದಲಾವಣೆ ಮಾಡಿ, ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಡಿ ದಾಖಲಾಗಿದ್ದ ಎಫ್‍ಐಆರ್ ಸಂಬಂಧ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News