ಮೈಸೂರು: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

Update: 2020-09-30 17:28 GMT

ಮೈಸೂರು,ಸೆ.30: ನಗರದ ಮೆಟ್ರೊಪೋಲ್ ಬಳಿಯ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಂಗಳವಾರ ತಡರಾತ್ರಿ ಈತನನ್ನು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಜನನಿಬಿಡ ಸ್ಥಳದಲ್ಲಿ ಈ ಹತ್ಯೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೃತ ವ್ಯಕ್ತಿಯ ಬಳಿ ಹಲವಾರು ಪಾನ್ ಕಾರ್ಡ್ ಎಟಿಎಂ ಕಾರ್ಡ್ ಸೇರಿದಂತೆ ವಿವಿಧ ಬಗೆಯ ಕಾರ್ಡ್‍ಗಳು ಲಭ್ಯವಾಗಿವೆ. ಈತ ಮಲಗಿದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ಎ.ಎನ್.ಪ್ರಕಾಶ್ ಗೌಡ, ಅಪರಾಧ ವಿಭಾಗದ ಡಿಸಿಪಿ ಗೀತಾ ಪ್ರಸನ್ನ, ಲಕ್ಷ್ಮಿ ಪುರಂ ಠಾಣೆ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈತನ ಬಳಿ ದೊರೆತಿರುವ ಕಾರ್ಡ್ ಗಳು ಹೇಗೆ ಬಂದವು ಎಂಬ ಬಗ್ಗೆ ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಘಟನೆ ಸಂಬಂಧ ಸಿಸಿ ಟಿವಿ ಫೊಟೇಜ್‍ಗಳನ್ನು ಕಲೆಹಾಕಲಾಗುತ್ತಿದೆ. 

ಈ ಸಂಬಂಧ ಲಕ್ಷ್ಮಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News