ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರು

Update: 2020-10-01 12:44 GMT

ಹೊಸದಿಲ್ಲಿ,ಅ.1: ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಹಾಥರಸ್ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತನ್ನನ್ನು ನೆಲಕ್ಕೆ ತಳ್ಳಿದ ಪೊಲೀಸರು, ಲಾಠಿ ಚಾರ್ಜ್ ಮಾಡಿದರು. ನಾನು ಹಾಗೂ ನನ್ನ ಸಹೋದರಿ ಪ್ರಿಯಾಂಕಾ ಗಾಂಧಿ ದಿಲ್ಲಿ ಹಾಗೂ ಉತ್ತರ ಪ್ರದೇಶ ನಡುವಿನ ಹೆದ್ದಾರಿಯಲ್ಲಿ ನಮ್ಮ ವಾಹನವನ್ನು ತಡೆ ಹಿಡಿದ ಕಾರಣ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದೆವು ಎಂದು ರಾಹುಲ್ ಹೇಳಿದ್ದಾರೆ.

ಉತ್ತರಪ್ರದೇಶ ಪೊಲೀಸರು ಕಾಲ್ನಡಿಗೆಯನ್ನು ಮುಂದುವರಿಸಲು ಅವಕಾಶ ನೀಡದೇ ಇದ್ದಾಗ ರಾಹುಲ್ ಗಾಂಧಿ ಹಾಗೂ ಅವರ ನೂರಾರು ಬೆಂಬಲಿಗರು ರಸ್ತೆಯಲ್ಲಿ ಕುಳಿತುಕೊಂಡರು. ಕಾಂಗ್ರೆಸ್ ನಾಯಕರ ಭೇಟಿಗಿಂತ ಮೊದಲೇ ಉತ್ತರ ಪ್ರದೇಶ ಆಡಳಿತವು 144 ಸೆಕ್ಷನ್ ಜಾರಿಗೊಳಿಸಿತ್ತು. ಗಡಿ ಪ್ರದೇಶದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News