ರೈತ ವಿರೋಧಿ ಮಸೂದೆ ಜಾರಿ ವಿರೋಧಿಸಿ ಅ.2ರಂದು ಕಿಮ್ಮನೆ ಉಪವಾಸ ಸತ್ಯಾಗ್ರಹ

Update: 2020-10-01 10:25 GMT

ಶಿವಮೊಗ್ಗ, ಅ.1: ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ  ಕೃಷಿ ಮಸೂದೆಗಳ ವಿರುದ್ದ  ಹಾಗೂ ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಮುಖ್ಯಮಂತ್ರಿ ನಡೆಯ ವಿರುದ್ಧ ಮಾಜಿ ಸಚಿವ, ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಗಾಂಧಿ ಜಯಂತಿಯಂದು ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ತೀರ್ಥಹಳ್ಳಿಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಅ.2ರಂದು ಬೆಳಗ್ಗೆ 10 ಗಂಟೆಗೆ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News