ಬ್ರಹ್ಮಾವರ : 7ನೇ ತರಗತಿಯ ಬಾಲಕ ನೇಣುಬಿಗಿದು ಆತ್ಮಹತ್ಯೆ

Update: 2020-10-01 11:48 GMT

ಬ್ರಹ್ಮವಾರ :  ಏಳನೆ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕಾಜ್ರಳ್ಳಿ ಜನತಾ ಕಾಲನಿಯಲ್ಲಿ ಬುಧವಾರ ನಡೆದಿದೆ.

ಮೃತ ಬಾಲಕನನ್ನು ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ವಿತಾ ಎಂಬವರ ಪುತ್ರ ತನುಷ್ (12) ಎಂದು ಗುರುತಿಸಲಾಗಿದೆ.

ತನುಷ್ 7 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಲಿಯುವಿಕೆಯಲ್ಲಿ ಹಿಂದಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News