ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಒಪ್ಪಿಗೆ ಬಾಕಿ: ರಘುಪತಿ ಭಟ್

Update: 2020-10-01 12:24 GMT

ಉಡುಪಿ, ಅ.1: ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಇನ್ನು ಸಚಿವ ಸಂಪುಟ ಸಭೆಯ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿ ಒಪ್ಪಿಗೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

 ಜಿಲ್ಲಾಸ್ಪತ್ರೆಯನ್ನು 250 ಬೆಡ್ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಕಟ್ಟಡ ಹಾಗೂ ಕಲ್ಪಿಸಬೇಕಾದ ಸೌಲಭ್ಯಗಳು ಕುರಿತ ಸಂಪೂರ್ಣ ವರದಿ ಯನ್ನಾಧರಿಸಿದ 150 ಕೋಟಿ ರೂ. ಯೋಜನೆಯ ಪ್ರಸ್ತಾವನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆಯನ್ನು ನೀಡಿದೆ. ಈ ಯೋಜನೆಯ ಪ್ರಸ್ತಾವನೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆಗೊಳ್ಳಲು ಬಾಕಿ ಇದೆ. ಆದುದ ರಿಂದ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ಕೈಗೊಂಡವರು ತಮ್ಮ ಪ್ರತಿಭಟನೆಯನ್ನು ವಾಪಾಸು ಪಡೆಯುವಂತೆ ಶಾಸಕ ಕೆ.ರಘುಪತಿ ಭಟ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News