ಶಿವಮೊಗ್ಗದಲ್ಲಿ ರೌಡಿಶೀಟರ್ ಕೊಲೆ: ಹಳೆಯ ದ್ವೇಷದ ಹಿನ್ನಲೆಯಲ್ಲಿ ಕೃತ್ಯ ಶಂಕೆ

Update: 2020-10-01 13:12 GMT

ಶಿವಮೊಗ್ಗ; ಭದ್ರಾವತಿಯ ಹೊಸಮನೆ ವ್ಯಾಪ್ತಿಯ ಹನುಮಂತನಗರದಲ್ಲಿ ರೌಡಿಶೀಟರೊಬ್ಬನನ್ನು ಬಡಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಹನುಮಂತನಗರ ನಿವಾಸಿ ಶಾರು ಅಲಿಯಾಸ್ ಶಾರುಖ್‌ ಖಾನ್(26) ಕೊಲೆಯಾದ ವ್ಯಕ್ತಿ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪಾಳುಬಿದ್ದ ಜಾಗದಲ್ಲಿ ಹತ್ಯೆ ಮಾಡಲಾಗಿದ್ದು ಆ ಭಾಗದಲ್ಲಿ ಇಸ್ಪೀಟು, ಗಾಂಜಾ ಸೇರಿದಂತೆ ಇನ್ನಿತರೆ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುತ್ತವೆ ಎಂದು ಸ್ಥಳೀಯರು ದೂರಿದ್ದಾರೆ. ಮೃತ ವ್ಯಕ್ತಿ ಕೂಡ ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ಕೂಡ ದಾಖಲಾಗಿವೆ ಎನ್ನಲಾಗಿದೆ.

ಗುರುವಾರ ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆದರಿಸಿ ಸ್ಥಳಕ್ಕಾಗಮಿಸಿದ ಹೊಸಮನೆ ಶಿವಾಜಿ ಸರ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹತ್ಯೆ ಮಾಡಿದವರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News