ಅ.2: ಕಾಂಗ್ರೆಸ್‌ನಿಂದ ‘ರೈತ, ಕಾರ್ಮಿಕರ ಉಳಿಸಿ’ ದಿನ

Update: 2020-10-01 14:21 GMT

ಉಡುಪಿ, ಅ.1: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವಾದ ಅ.2ರನ್ನು ಜಿಲ್ಲಾ ಕಾಂಗ್ರೆಸ್ ‘ರೈತರು ಮತ್ತು ಕೃಷಿ ಕಾರ್ಮಿಕರನ್ನು ಉಳಿಸಿ’ (ಕಿಸಾನ್ - ಮಜ್ದೂರ್ ಬಚಾವೊ ದಿವಸ್ ಆಚರಣ್) ದಿನವಾಗಿ ಆಚರಿಸಲು ನಿರ್ಧರಿಸಿದೆ.

ಆ ಪ್ರಯುಕ್ತ ಅ.2ರ  ಬೆಳಗ್ಗೆ 10  ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ, ಜಿಲ್ಲಾ ಕಾಂಗ್ರೆಸ್ ಹಾಗೂ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್‌ಗಳು ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಭೆಯನ್ನುದ್ದೇಶಿಸಿ ಖ್ಯಾತ ವಾಗ್ಮಿ, ಕೆಪಿಸಿಸಿ ಪ್ಯಾನಲಿಸ್ಟ್ ಸುಧೀರ್ ಕುಮಾರ್ ಮುರೋಳಿ ಮಾತನಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News