ಆಂಧ್ರ: ವಸತಿಕಟ್ಟಡದಿಂದ ಜಿಗಿದು ಅರಣ್ಯಾಧಿಕಾರಿ ಆತ್ಮಹತ್ಯೆ

Update: 2020-10-01 16:27 GMT

ಹೈದರಾಬಾದ್, ಅ.1: ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬಹುಮಹಡಿ ವಸತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ನಾಗೊಲ್ ಪ್ರದೇಶದಲ್ಲಿ ಗುರುವಾರ ನಡೆದಿದೆ.

ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್)ಯ 1987ನೇ ಬ್ಯಾಚ್‌ನ ಅಧಿಕಾರಿಯಾದ ರಾಮಣ್ಣ ಮೂರ್ತಿ, ತನ್ನ ನಿವಾಸವಿರುವ ವಸತಿ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಈವರೆಗೆ ತಿಳಿದುಬಂದಿಲ್ಲವೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂರ್ತಿ ಅವರು ಆಂಧ್ರಪ್ರದೇಶದ ಕರಾವಳಿ ವಲಯ ನಿರ್ವಹಣಾ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಮೃತ ಮೂರ್ತಿ ಅವರು ತನ್ನ ಕುಟುಂಬದೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸ ವಾಗಿದ್ದರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News