'ವಿದ್ಯುತ್, ನೀರಿನ ವ್ಯವಸ್ಥೆಯೊಂದಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ'

Update: 2020-10-01 16:57 GMT

ಮಂಗಳೂರು, ಅ.1: ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿ ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಂಗಳೂರು ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘವು ಮಂಗಳೂರು ಮನಪಾ ಆಯುಕ್ತರಿಗೆ ಲಿಖಿತ ಮನವಿ ಸಲ್ಲಿಸಿದೆ.

ರಾಜ್ಯ ಹೈಕೋರ್ಟ್ ಸೆ.11ರಂದು ಹೊರಡಿಸಿದ ಆದೇಶದಂತೆ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕಿತ್ತು. ಕೇಂದ್ರ ಮಾರುಕಟ್ಟೆ ಒಳಾಂಗಣದಲ್ಲಿ ನಿತ್ಯದರ ವಸೂಲಾತಿಯೊಂದಿಗೆ ಅನುಮತಿಸಲ್ಪಟ್ಟ ಚಿಲ್ಲರೆ ವ್ಯಾಪಾರಿಗಳಿಗೆ ವ್ಯವಹಾರ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಘದ ಅಧ್ಯಕ್ಷ ಹಸನ್ ಕೆಮ್ಮಿಂಜೆ ‘ನಾವು ಈಗಾಗಲೆ ಮನಪಾ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಇನ್ನೂ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ನ್ಯಾಯವಾದಿಯ ಜೊತೆ ಚರ್ಚೆ ನಡೆಸಿ ಮುಂದಿನ ನಡೆಯ ತೀರ್ಮಾನಿಸಲಿದ್ದೇವೆ’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News