ಬೈಕ್ ಅಪಘಾತ: ಸವಾರ ಯುವಕ ಸಾವು

Update: 2020-10-01 17:35 GMT

ಪುತ್ತೂರು : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿ ಬಿದ್ದು ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಪುತ್ತೂರು ತಾಲೂಕಿನ ಈಶ್ವರಮಂಗಲ ಸಮಿಪದ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.

ಈಶ್ವರಮಂಗಲ ನಿವಾಸಿ ಲಿಂಗಪ್ಪ ಗೌಡ ಎಂಬವರ ಪುತ್ರ ಮೋಹಿತ್ ಗೌಡ(19) ಮೃತಪಟ್ಟ ಯುವಕ. ಮೋಹಿತ್ ಗೌಡ ಅವರು ಈಶ್ವರಮಂಗಲ ಬಿಜೆಪಿ ಬೂತ್ ಸಹ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅವರು ತನ್ನ ಡಿಯೋ ಬೈಕ್‍ನಲ್ಲಿ ಮೇನಾಲದಿಂದ ಈಶ್ವರಮಂಗಲವನ್ನು ಸಂಪರ್ಕಿಸುವ ರಸ್ತೆಯಲ್ಲಿ ಸಂಚರಿಸುತ್ತಿರುವ ವೇಳೆಯಲ್ಲಿ ಈ ಅವಘಡ ಸಂಭವಿಸಿತ್ತು. ಬೈಕ್ ಸ್ಕಿಡ್ ಆಗಿ ರಸ್ತೆಗುರುಳಿದ ವೇಳೆಯಲ್ಲಿ ರಸ್ತೆಗೆಸೆಯಲ್ಪಟ್ಟ ಮೋಹಿತ್ ಅವರ ತಲೆಗೆ ಬಲವಾದ ಏಟು ಬಿದ್ದು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈಶ್ವರಮಂಗಲ ಹೊರಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News