ರಾಮರಾಜ್ಯದ ಹೆಸರಿನಲ್ಲಿ‌ ಅಧಿಕಾರಕ್ಕೆ ಬಂದ ಬಿಜೆಪಿ ಯು.ಪಿ.ಯನ್ನು ಗೂಂಡಾ ರಾಜ್ಯ ಮಾಡಿದೆ: ಧ್ರುವನಾರಾಯಣ್

Update: 2020-10-02 06:47 GMT

ಮೈಸೂರು, ಅ.2: ರಾಮರಾಜ್ಯದ ಹೆಸರಿನಲ್ಲಿ‌ ಅಧಿಕಾರಕ್ಕೆ ಬಂದ ಆದಿತ್ಯನಾಥ್ ನೇತೃತ್ವದ  ಬಿಜೆಪಿ ಸರಕಾರ ಉತ್ತರ ಪ್ರದೇಶವನ್ನು ಗೂಂಡಾ ರಾಜ್ಯ ಮಾಡಿದೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲೇ ಅತ್ಯಾಚಾರ, ಕೊಲೆ, ಸುಲಿಗೆ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ ಎಂದು ಎನ್.ಸಿ.ಆರ್.ಬಿ. ವರದಿ ನೀಡಿದೆ. ಉತ್ತರ ಪ್ರದೇಶದಲ್ಲಿ ಮಹುಳೆಯರು ಮತ್ತು ದಲಿತರಿಗೆ ರಕ್ಷಣೆಯೇ ಇಲ್ಲದಂತಾಗಿದೆ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದು ಆಕೆಯನ್ನು ಹತ್ಯೆ ಮಾಡಲಾಗಿದೆ. ಯುವತಿ ಶವವನ್ನು ಪೊಲೀಸರೇ ಸುಟ್ಟುಹಾಕುವ ಮೂಲಕ ಈ ಪ್ರಕರಣದ ಸಾಕ್ಷ್ಯವನ್ನು  ನಾಶಪಡಿಸಲಾಗಿದೆ. ಜನರಿಗೆ ರಕ್ಷಣೆ ನೀಡಲಾಗದಿದ್ದ ಮೇಲೆ ಇಂತಹ ಸರಕಾರ ಇರಬೇಕೆ?  ಹಾಗಾಗಿ ಕೂಡಲೇ ಈ ಸರಕಾರವನ್ನು ರಾಷ್ಟ್ರಪತಿ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಭೇಟಿ ಪಡಾವೊ, ಭೇಟಿ ಬಚಾವೊ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿ ಈ ಘಟನೆ ನಡೆದು‌ ಎರಡು ದಿನಗಳಾದರೂ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತ ಯುವತಿಯ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಹೊರಟ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಮೇಲೆ ಹಲ್ಲೆ ನಡೆಸಿ ಅವರನ್ನು ಅರ್ಧದಲ್ಲೆ ತಡೆಯಲಾಗುತ್ತದೆ ಎಂದರೆ ನಮ್ಮ ದೇಶ ಎಂತಹ ಸ್ಥತಿಯಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರುಗಳಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಡಾ.ಬಿ.ಜೆ.ವಿಜಯ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News