ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Update: 2020-10-02 14:22 GMT

ಬಳ್ಳಾರಿ, ಅ.2: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಹಂದ್ಯಾಳ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಬಳ್ಳಾರಿ ತಾಲೂಕಿನ ಹಂದ್ಯಾಳ್ ಗ್ರಾಮದ ಮಹಮ್ಮದ್ ಶರೀಫ್(6) ಮೃತಪಟ್ಟ ಬಾಲಕ ಎಂದುಗುರುತಿಸಲಾಗಿದೆ. ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ಅರ್ಥಿಂಗ್ ತಂತಿಯನ್ನು ಆಟವಾಡುವ ಸಂದರ್ಭದಲ್ಲಿ ಮುಟ್ಟಿದ ಕಾರಣ ವಿದ್ಯುತ್ ಪ್ರವಹಿಸಿ ಬಾಲಕ ಸಾವಿಗೀಡಾಗಿದ್ದಾನೆ.

ಹಲವಾರು ದಿನಗಳಿಂದ ವಿದ್ಯುತ್ ತಂತಿಯನ್ನು ತೆರೆವುಗೊಳಿಸುವಂತೆ ಮನೆಯವರು ಆಗ್ರಹಿಸಿದ್ದರು. ಆದರೆ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದಿರಲಿಲ್ಲ. ಈಗ ಅಧಿಕಾರಿಗಳ ನಿರ್ಲಕ್ಷ್ಯವೇ ಇಂದು ಮಗು ಸಾವಿಗೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News