ಯೋಗಿ ಆದಿತ್ಯನಾಥ್ ಡೋಂಗಿ ಸನ್ಯಾಸಿ: ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

Update: 2020-10-02 16:30 GMT

ಶಿವಮೊಗ್ಗ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಬ್ಬ ಡೋಂಗಿ ಸನ್ಯಾಸಿ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ನಿಜವಾದ ಸನ್ಯಾಸಿಯಾಗಿದ್ದರೆ ಸ್ವಾಭಿಮಾನ ಇರಬೇಕಿತ್ತು. ಒಬ್ಬ ದಲಿತ ಹೆಣ್ಣು ಮಗಳ‌ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಈ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿ ಪೊಲೀಸರ ಮೂಲಕ ಅಂತ್ಯಸಂಸ್ಕಾರ ಮಾಡಿಸಿ ಪ್ರಕರಣ ಮುಚ್ಚಿಹಾಕಲು ಮುಂದಾಗಿದ್ದಾರೆ. ಇವರು ನಿಜವಾದ ಸನ್ಯಾಸಿನಾ ಎಂದು ಪ್ರಶ್ನೆ ಮಾಡಿದ್ದಾರೆ.

ನಾನೊಬ್ಬ ರೈತ ನಾಯಕ ಅಂತ ಹೇಳಿಕೊಳ್ಳುವ ಮುಖ್ಯಮಂತ್ರಿ ಒಬ್ಬ ಡೋಂಗಿ ರೈತ ನಾಯಕ ಎಂದು ಸಾಬೀತು ಮಾಡಿದ್ದಾರೆ. ರೈತರ ಹೆಸರಿನಲ್ಲಿ, ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿ, ಈಗ ರೈತ ವಿರೋಧಿಯಾಗಿರುವ ಭೂ ಸುಧಾರಣೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಪೋರೇಟ್ ಕಂಪನಿಗಳಿಗೆ ರತ್ನಗಂಬಳಿ ಹಾಸುತ್ತಿದ್ದಾರೆ ಎಂದು ಅರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News